ದಕ್ಷಿಣಕನ್ನಡ; ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದ ಉಪ್ಪಿನಂಗಡಿಯ ಯುವಕ ಸಾವು
A young man from Uppinangady who had gone on a trip to Kerala died
Uppinangady; ಕೇರಳಕ್ಕೆ ಪ್ರವಾಸಕ್ಕೆ ತೆರಳಿದ್ದ ಉಪ್ಪಿನಂಗಡಿಯ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.ಉಪ್ಪಿನಂಗಡಿ(Uppinangady) ಸಮೀಪದ ಹಿರೇಬಂಡಾಡಿ ಅಡೆಕ್ಕಲ್ ನಿವಾಸಿ ಅಝೀಂ (20) ಮೃತ ಯುವಕ.
ಅಝೀಂ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು ನಿನ್ನೆ ರಾತ್ರಿ ಸ್ನೇಹಿತರೆಲ್ಲ ಸೇರಿಕೊಂಡು ವಯನಾಡ್ ಗೆ ಪ್ರವಾಸಕ್ಕೆ ತೆರಳಿದ್ದರು. ನಿನ್ನೆ ರಾತ್ರಿ ತೆರಳಿದವರು ರೂಮ್ ಅಲ್ಲಿ ಸ್ಟೇ ಆಗಿದ್ದು, ಇಂದು ಬೆಳಿಗ್ಗೆ ಪಯ್ಯನೂರು ಸಮೀಪ ಕೆರೆಯಲ್ಲಿ ಸ್ನಾನ ಮಾಡಲು ಇಳಿದಿದ್ದರು.
ಈ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಪೆರಿಯಾರು ಮೆಡಿಕಲ್ ಕಾಲೇಜಿನಲ್ಲಿ ಮೃತದೇಹವನ್ನಿರಿಸಲಾಗಿದೆ.