ದರ್ಶನ್ ಮ್ಯಾನೇಜರ್ ಆತ್ಮಹತ್ಯೆ!

ದರ್ಶನ್ ಮ್ಯಾನೇಜರ್ ಆತ್ಮಹತ್ಯೆ!

ದರ್ಶನ್‌ ಬಳಿ ಹಲವು ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದ ಶ್ರೀಧರ್‌ (35) ವಿಷ ಸೇವಿಸಿ ಏ. 17 ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕೀಟನಾಶಕ ಸೇವನೆ ಮಾಡಿ ಶ್ರೀಧರ್‌ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆತ ಕಾಣೆಯಾಗಿದ್ದಾನೆಂದು ಎಲ್ಲರೂ ಭಾವಿಸಿದ್ದರು. ಆದರೆ ಈಗ ಶವ ಪತ್ತೆಯಾಗಿದ್ದು, ಜೊತೆಗೆ ಆತ ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ.

ನನ್ನ ವೈಯುಕ್ತಿಕ ಕಾರಣದಿಂದ ಅಂದರೆ ಒಂಟಿತನದಿಂದ ಬೇಸತ್ತು ನಾನು ಇವತ್ತು ಸಾಯುತ್ತಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ, ದಯವಿಟ್ಟು ಯಾರಿಗೂ ತೊಂದರೆ ಕೊಡಬೇಡಿ. ಮನೆಯವರು ಪೊಲೀಸರಿಗೆ ದೂರು ನೀಡಿದರೂ ಕೂಡ ಯಾರಿಗೂ ತೊಂದರೆ ಕೊಡಬೇಡಿ. ಅವರ ಜೊತೆ ಹೋಗಿದ್ದ, ಇವರ ಜೊತೆ ಹೋಗಿದ್ದ, ಕೊನೆಯ ಬಾರಿಗೆ ಅವರಿಗೆ ಕಾಲ್ ಮಾಡಿದ್ದ ಅಂತ ಎಲ್ಲಾ ತನಿಖೆ ಮಾಡೋದು ಬೇಡ. ಮನೆಯವರಿಗೆ, ನನ್ನ ಸ್ನೇಹಿತರಿಗೂ ಹೇಳ್ತಿದ್ದೀನಿ, ಬಹಳ ಯೋಚನೆ ಮಾಡಿ ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸೆಲ್ಫಿ ವಿಡಿಯೋದಲ್ಲಿ ಮೃತ ಶ್ರೀಧರ್ ಹೇಳಿದ್ದಾರೆ.

­

Leave A Reply

Your email address will not be published.