ಉಡುಪಿಯಲ್ಲಿ ಬೆಚ್ಚಿಬೀಳಿಸುವ ಗ್ಯಾಂಗ್ ವಾರ್
ಉಡುಪಿಯಲ್ಲಿ ಬೆಚ್ಚಿಬೀಳಿಸುವ ಗ್ಯಾಂಗ್ ವಾರ್
ಉಡುಪಿಯ ಪುತ್ತೂರಿನ ಬಿರಿಯಾನಿ ಪಾಯಿಂಟ್ ಬಳಿ ಜೂನ್ 15 ರಂದು ಗ್ಯಾಂಗ್ ವಾರ್ ನಡೆದಿದ್ದು, ಜನರು ಭಯಭೀತರಾಗಿದ್ದಾರೆ.ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳು ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಪ್ರಕರಣ ವರದಿಯಾದವು. ಹೆಚ್ಚುತ್ತಿರುವ ಗ್ಯಾಂಗ್ ವಾರ್ನಿಂದ ಉಡುಪಿ ನಗರದ ಜನತೆ ಭಯ ಭೀತರಾಗಿದ್ದಾರೆ.
ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ 2 ಗಂಟೆಯ ಹೊತ್ತಿಗೆ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡ ಎರಡು ತಂಡಗಳು ಗಾಂಜಾ ಅಮಲಿನಲ್ಲಿ ಸಿನಿಮಾ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ಅಲ್ಲದೆ ತಲವಾರು ಹಿಡಿದು, ಬಡಿದಾಡಿಕೊಂಡಿದ್ದವು. ನಗರವೆಲ್ಲ ಸೈಲೆಂಟ್ ಆಗಿರುವ ಹೊತ್ತಿಗೆ ಕಾರುಗಳ ಗುದ್ದಾಟ, ತಲವಾರು ಹಿಡಿದು ಬಡಿದಾಡುತ್ತಿರುವುದನ್ನು ಸುತ್ತಲಿನ ಫ್ಲ್ಯಾಟ್ ನಿವಾಸಿಗಳು ಕಂಡು ಬೆಚ್ಚಿ ಬಿದ್ದಿದ್ದರು.
ಉಡುಪಿಯ ಪುತ್ತೂರಿನ ಸೆಲೂನ್ವೊಂದರಲ್ಲಿ ಕೆಲಸ ನಿರ್ವಹಿಸಿಕೊಂಡಿರುವ ಚರಣ್ ಯು. (18) ಹಲ್ಲೆಗೊಳಗಾದವರು. ಪೋಲಿಸರು ತನಿಖೆ ನಡೆಸುತ್ತಿದ್ದು ಹಲ್ಲೆಯ ಕಾರಣ ಬಯಲಾಗಬೇಕಿದೆ.