ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಪೊಲೀಸ್​ ಆಯುಕ್ತ ಬಿ ದಯಾನಂದ್​ ಹೇಳಿದ್ದೇನು !

ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಬೆಂಗಳೂರು ಪೊಲೀಸ್​ ಆಯುಕ್ತ ಬಿ ದಯಾನಂದ್​ ಹೇಳಿದ್ದೇನು !

 

 ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್​ ಆಯುಕ್ತ ಬಿ ದಯಾನಂದ್​ ​​ಸುದ್ದಿಗೋಷ್ಠಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ನಟ ದರ್ಶನ್ ಬಂಧನ ಹಿನ್ನೆಲೆಯಲ್ಲಿ ಪ್ರತಿದಿನ ಠಾಣೆ ಮುಂದೆ ಅಭಿಮಾನಿಗಳು ಜಮಾಯಿಸಿ ಜೈಕಾರ ಕೂಗುತ್ತಿದ್ದಾರೆ.‌ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಿಂದ ಜನರು ದಾಂಗುಡಿ ಇಡುತ್ತಿದ್ದು, ಸ್ಥಳೀಯ ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 17 ಆರೋಪಿಗಳನ್ನ ಬಂಧಿಸಲಾಗಿದೆ. ಕೂಲಂಕಷವಾದ ತನಿಖೆ ಮಾಡಲಾಗುತ್ತಿದೆ. ಬೇರೆ ಬೇರೆ ಆಯಾಮಗಳಿಂದ ತನಿಖೆಯನ್ನ ನಡೆಸಲಾಗುತ್ತಿದೆ. ಸಮರ್ಪಕವಾದ ರೀತಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆಯ ವಿವರಗಳನ್ನ ನಾವು ಈಗಲೇ ಹೇಳಲು ಆಗುವುದಿಲ್ಲ. ಸ್ವಲ್ಪ ನಿರ್ಲಕ್ಷ್ಯವಹಿಸಿದ್ದರೂ ಪ್ರಕರಣ ಬೇರೆ ದಾರಿ ಹಿಡಿಯುತ್ತಿತ್ತು ಎಂದು ಬೆಂಗಳೂರು ಪೊಲೀಸ್​ ಆಯುಕ್ತ​ ಬಿ. ದಯಾನಂದ್ (Police Commissioner B Dayanand) ಹೇಳಿದ್ದಾರೆ.

Leave A Reply

Your email address will not be published.