ದರ್ಶನ್ ಭೇಟಿಗೆ ಬಂದರೆ ಪತ್ನಿ ವಿಜಯಲಕ್ಷ್ಮಿ? ಕರಗಿತೆ ಸಿಟ್ಟು ?
ದರ್ಶನ್ ಭೇಟಿಗೆ ಬಂದರೆ ಪತ್ನಿ ವಿಜಯಲಕ್ಷ್ಮಿ? ಕರಗಿತೆ ಸಿಟ್ಟು ?
ಹತ್ಯೆ ಮಾಡಿದ ಆರೋಪ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಮೇಲಿದೆ. ಸದ್ಯ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಹಾಗೂ ಅವರ ಸಹಚರರು ಇದ್ದಾರೆ.
ಪತಿ ದರ್ಶನ್ ಅವರ ಕುರಿತಾಗಿ ಕೊಲೆ ಆರೋಪ ಕೇಳಿ ಬರುತ್ತಿದ್ದಂತೆ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೋ ಡಿಲೀಟ್ ಮಾಡಿ ದರ್ಶನ್ ಅವರನ್ನು ಅನ್ಫಾಲೋ ಮಾಡಿದ್ದರು. ಆದರೆ ಮತ್ತೆ ಸೋಶಿಯಲ್ ಮೀಡಿಯಾಗೆ ಎಂಟ್ರಿ ಕೊಟ್ಟಿದ್ದರು.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪತಿ ಅರೆಸ್ಟ್ ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ, ದರ್ಶನ್ ಮೇಲೆ ಪತ್ನಿ ಕೋಪಗೊಂಡಿರಬೇಕು ಎನ್ನುವ ಮಾತು ಇತ್ತು. ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಪತಿಯನ್ನು ನೋಡಲು ವಿಜಯಲಕ್ಷ್ಮಿ ಪೊಲೀಸ್ ಠಾಣೆಗೆ ಬಂದಿದ್ದಾರೆ.
ಇದೀಗ ಪತಿಯನ್ನು ನೋಡಲು ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಗೆ ಬಂದಿದ್ದಾರೆ. ಪತಿ ಜತೆ ಮಾತನಾಡಲು ಅಧಿಕಾರಿಗಳ ಬಳಿ ಅವಕಾಶ ಕೇಳಿದ್ದಾರೆ ಎನ್ನಲಾಗಿದೆ.