ಶ್ರೀರಾಮುಲು ಬಂಧನ! ಕಾರಣವೇನು ಗೊತ್ತೆ ?
ಶ್ರೀರಾಮುಲು ಬಂಧನ! ಕಾರಣವೇನು ಗೊತ್ತೆ ?
![](https://hosavishya.com/wp-content/uploads/2024/06/download-19.jpeg)
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕೆಂದು ಮಾಜಿ ಸಚಿವ ಶ್ರೀರಾಮುಲು ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ಇಂದು ಶ್ರೀರಾಮುಲು ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಬಂಧನದ ವೇಳೆ ಭಾರಿ ಹೈಡ್ರಾಮ ನಡೆದಿದೆ. ಬಂಧನಕ್ಕೆ ಕಾರಣ ನೀಡಿ ಎಂದು ಆಕ್ರೋಶ ವ್ಯಕ್ತವಾಯ್ತು. ಈ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನವಾಗೋವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ಶ್ರೀರಾಮುಲು ಮತ್ತು ಬಿಜೆಪಿ ಕಾರ್ಯಕರ್ತರು ಒಟ್ಟು ಹಿಡಿದಿದ್ದರು.
ಪ್ರತಿಭಟನೆಗೆ ಒಂದು ದಿನ ಮಾತ್ರ ಅನುಮತಿ ಪಡೆದಿದ್ದರು. ಅಹೋರಾತ್ರಿ ಸೇರಿದಂತೆ ಇಂದು ಪ್ರತಿಭಟನೆ ಮುಂದುವರೆಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಬಳಿ ಶ್ರೀರಾಮುಲು ಅವರ ಬಂಧನ ಮಾಡಲಾಗಿದೆ.