ದರ್ಶನ್ ಪರ ನಿತ್ತ ಸೋನುಗೌಡ ರೇಣುಕಾಸ್ವಾಮಿಯ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ
ದರ್ಶನ್ ಪರ ನಿತ್ತ ಸೋನುಗೌಡ ರೇಣುಕಾಸ್ವಾಮಿಯ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇದರ ಮಧ್ಯೆ ನೆಚ್ಚಿನ ನಟ ಜೈಲು ಸೇರಿದ ಹಿನ್ನೆಲೆಯಲ್ಲಿ ಸೋನು ಗೌಡ ಬೇಸರ ಹೊರ ಹಾಕಿದ್ದಾರೆ. ಹಾಗೂ ಆ ಅಕೌಂಟ್ನಿಂದ ನನಗೂ ಅಶ್ಲೀಲ ಮೆಸೇಜ್ ಬಂದಿದೆ ಅಂತ ಯ್ಯೂಟೂಬ್ ಚಾನೆಲ್ನಲ್ಲಿ ಬೇಸರ ವ್ಕಕ್ತ ಪಡಿಸಿದ್ದಾರೆ.
ನಟ ದರ್ಶನ್ ಜೈಲಿಗೆ ಹೋದ ಬಳಿಕ ಕೊಲೆಯಾದ ರೇಣುಕಾಸ್ವಾಮಿ ನನಗೂ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಎಂದು ಸೋನುಗೌಡ ಹೇಳಿಕೊಂಡಿದ್ದಾರೆ. ಈ ಅಕೌಂಟ್ನಿಂದ ಸಾಕಷ್ಟು ಹುಡುಗಿಯರಿಗೆ ಈತ ಕೆಟ್ಟ ಕೆಟ್ಟದಾಗಿ ಮೆಸೇಜ್ ಮಾಡಿದ್ದ. ನಾನೂ ನನ್ನ ಫೋನ್ನಲ್ಲಿ ಚೆಕ್ ಮಾಡಿದೆ. ಆಗ ನನಗೂ ಆತ ಮೆಸೇಜ್ ಮಾಡಿದ್ದ. ನನಗೂ ಕೆಟ್ಟದಾಗಿ ಅನೇಕರು ಕಾಮೆಂಟ್ ಮಾಡುತ್ತಾರೆ. ನಿಮ್ಮ ಮನೆ ಹೆಣ್ಣು ಮಕ್ಕಳಿಗೆ ಕಾಮೆಂಟ್ ಮಾಡಿದ್ರೆ ಸುಮ್ಮನೆ ಇರ್ತೀರಾ? ಎಂದು ಸೋನು ಆಕ್ರೋಶ ಹೊರಹಾಕಿದ್ದಾರೆ.
“ನಟ ದರ್ಶನ್ ಅವರಿಂದ ತುಂಬಾ ಜನರು ಬೆಳೆದಿದ್ದಾರೆ. ದರ್ಶನ್ ಅವರನ್ನು ಬಳಸಿಕೊಂಡವರು ಇದೀಗ ಯಾರೂ ಕೂಡ ಅವರ ಬಗ್ಗೆ ಮಾತನಾಡಲು ಮುಂದೆ ಬರುತ್ತಿಲ್ಲ. ದರ್ಶನ್ ಅವರಿಗೆ ಬಹಳಷ್ಟು ಜನರು ಮೋಸ ಮಾಡಿದ್ದಾರೆ, ಆದರೆ ಅವರು ಯಾರಿಗೂ ಮೋಸ ಮಾಡಿಲ್ಲ,” ಎಂದು ಸೋನು ಗೌಡ ಹೇಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
“ನಾನು ಕೂಡ ತಪ್ಪು ಮಾಡದೆ ಜೈಲಿಗೆ ಹೋಗಿ ಬಂದಿದ್ದೇನೆ. ಆದ್ದರಿಂದ ಧ್ವನಿ ಎತ್ತಬೇಕು ಅಂತಾ ಮಾತನಾಡುತ್ತಿದ್ದೇನೆ. ನನ್ನ ಬಗ್ಗೆ ನಾಳೆ ಯಾರೇ ಏನೆ ಮಾತನಾಡಿದರೂ ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳುವುದಿಲ್ಲ. ತಪ್ಪು ಮಾಡದೆ ಇದ್ದವರೆಲ್ಲ ಜೈಲಿಗೆ ಬಂದಿದ್ದನ್ನು ನಾನು ನೋಡಿದ್ದೇನೆ. ಕೆಟ್ಟದ್ದನ್ನು ಮಾಡಿದರೆ ಕಾನೂನು ಪ್ರಕಾರ ಶಿಕ್ಷೆ ಆಗತ್ತದೆ. ಅಂದು ಅಣ್ಣ, ತಮ್ಮ, ಮಗ ಅಂತಾ ಹೇಳುವವರು ಇಂದು ಬಾಸ್ ಬಗ್ಗೆ ಏನೂ ಮಾತನಾಡುತ್ತಿಲ್ಲ. ಇದು ತುಂಬಾ ಬೇಸರ ತಂದಿದೆ ಅಂತಾ ಸೋನು ಗೌಡ ಹೇಳಿದ್ದಾರೆ.
“ನಾನಂತೂ ದರ್ಶನ್ ಪರ ನಿಂತುಕೊಳ್ಳುತ್ತೇನೆ. ಮತ್ತೊಂದೆಡೆ ರೇಣುಕಾಸ್ವಾಮಿ ಕುಟುಂಬಕ್ಕೆ ಒಳ್ಳೆಯದಾಗಲಿ, ಕಾನೂನಿನ ಪ್ರಕಾರ ಅವರಿಗೆ ಏನು ಸಿಗಬೇಕೋ ಅದು ಸಿಗತ್ತದೆ. ದರ್ಶನ್ ಅವರ ಒಳ್ಳೆಯತನವೇ ಅವರನ್ನು ಕಾಪಾಡತ್ತದೆ,” ಎಂದು ಸೋನು ಗೌಡ ಹೇಳಿದ್ದಾರೆ.