ಕರ್ನಾಟಕ ಸಿಎಂ ಗೆ ಬಂದಿದ್ಯಾ ಅಂಬಾನಿ ಪುತ್ರನ ಮದುವೆ ಆಮಂತ್ರಣ?
ಕರ್ನಾಟಕ ಸಿಎಂ ಗೆ ಬಂದಿದ್ಯಾ ಅಂಬಾನಿ ಪುತ್ರನ ಮದುವೆ ಆಮಂತ್ರಣ?
ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿಯ ಮದುವೆ ನಡೆಯಲಿದೆ. ಈಗಾಗಲೇ ಮದುವೆ ಆಮಂತ್ರಣ ಪತ್ರಿಕೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿಎಂ ಸಿದ್ದರಾಮಯ್ಯಗೂ ಮದುವೆ ಆಹ್ವಾನಿಸಲಾಗಿದೆ ಎಂದು ವಿಡಿಯೋ ವೈರಲ್ ಮಾಡಲಾಗಿದೆ. ಆಮಂತ್ರಣ ಪತ್ರಿಕೆ ಮೇಲೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಹೆಸರು ಉಲ್ಲೇಖಿಸಿರುವ ಆಹ್ವಾನ ಪತ್ರಿಕೆ ಒಂದು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಸೋಶಿಯಲ್ ಮೀಡಿಯಾದಲ್ಲಿ ಮುಖೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಆಮಂತ್ರಣ ವೈರಲ್ ಆಗುತ್ತಿದೆ. ಚಿನ್ನದ ದೇವರ ವಿಗ್ರಹಗಳು, ಬೆಳ್ಳಿಯ ಪುಟ್ಟ ದೇವಾಲಯವಿರುವ ಬಾಕ್ಸ್ನೊಂದಿಗೆ ವಿಶೇಷವಾಗಿ ಮಾಡಿರುವ ಆಮಂತ್ರಣ ಪತ್ರ ವೈರಲ್ ಆಗುತ್ತಿದೆ.
ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಸಿಎಂ ಕಚೇರಿ ಅಧಿಕೃತವಾಗಿ ಯಾವುದೇ ಆಹ್ವಾನ ಬಂದಿಲ್ಲ ಎಂದಿದ್ದಾರೆ.ಆದರೆ ಈವರೆಗೆ ಯಾವುದೇ ರೀತಿ ಯ ಆಮಂತ್ರಣ ಸಿಎಂಗೆ ಬಂದಿಲ್ಲ. ಅಧಿಕೃತವಾಗಿ ಯಾವುದೇ ಆಹ್ವಾನ ಪತ್ರ ತಲುಪಿಲ್ಲ ಎಂದು ಸಿಎಂ ಕಚೇರಿಯಿಂದ ಸ್ಪಷ್ಟಪಡಿಸಲಾಗಿದೆ.ಅಂಬಾನಿ ಪುತ್ರನ ಮದುವೆ ಆಮಂತ್ರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಕಚೇರಿಯಿಂದ ಸ್ಪಷ್ಟನೆ ನೀಡಲಾಗಿದೆ.